ಮೊರಾರ್ಜಿ ವಸತಿ ಶಾಲೆಗೆ ಅರ್ಜಿ ಆಹ್ವಾನ
೨೦೧೯/೨೦ ನೇ ಸಾಲಿನ ಆರನೇ ತರಗತಿಗೆ ಸೇರಲು ರಾಮನಗರ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ ಅಂಬೇಡ್ಕರ್ ಬಾಲಕ/ಬಾಲಕಿ, ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಸಮನ್ವಯಾಧಿಕಾರಿ ಎಂ ಮಹೇಶ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೧೯/೨೦ ನೇ ಸಾಲಿನಲ್ಲಿ ಆರನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಅರ್ಜಿಸಲ್ಲಿಸಲು ಅರ್ಹರಾಗಿರುತ್ತಾರೆ,
ಅರ್ಜಿಗಳನ್ನು ೨೧/೧೨/೨೦೧೮ ರಿಂದಲೇ ವಿತರಿಸಲಾಗುತ್ತಿದ್ದು ಅರ್ಜಿಗಳು ರಾಮನಗರ ಜಿಲ್ಲೆಯ ಆಯಾಯ ತಾಲ್ಲೂಕಿನ ಎಲ್ಲಾ ವಸತಿ ಶಾಲೆಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿ, ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಾಮನಗರ ಜಿಲ್ಲೆ ಹಾಗೂ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗಳಲ್ಲಿ ಲಭ್ಯವಿರುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎರಡೂವರೆ ಲಕ್ಷ ರೂ, ಪ್ರ ವರ್ಗ ವಿದ್ಯಾರ್ಥಿಗಳು ಎರಡೂವರೆ ಲಕ್ಷ ರೂ, ಮತ್ತು ಹಿಂದುಳಿದ ವರ್ಗ ೨ಎ, ೨ಬಿ, ೩ಎ ಮತ್ತು ೩ಬಿ ಒಂದು ಲಕ್ಷ ರೂಪಾಯಿಗಳ ಆದಾಯ ಮಿತಿ ಹೊಂದಿರಬೇಕು ಹಾಗೂ ಅರ್ಜಿಯನ್ನು ಸಲ್ಲಿಸುವಾಗ ವಿದ್ಯಾರ್ಥಿಯ ಆಧಾರ್ ಕಾಡ್೯, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಪ್ರತಿ ಹಾಗೂ ಪಾಸ್ ಪೋರ್ಟ್ ಅಳತೆಯ ಮೂರು ಪೋಟೋಗಳನ್ನು ಲಗತ್ತಿಸಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ೧೫/೦೧/೨೦೧೯ ಕೊನೆಯ ದಿನಾಂಕವಾಗಿದ್ದು ಪ್ರವೇಶ ಪರೀಕ್ಷೆಯೂ ೧೦/೦೩/೨೦೧೯ ನೇ ಭಾನುವಾರ ಬೆಳಿಗ್ಗೆ ೧೦:೩೦ ಕ್ಕೆ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮತ್ತು ತಾಲ್ಲೂಕಿನ ಎಲ್ಲಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬೇಕೆಂದು ಸಮನ್ವಯಾಧಿಕಾರಿ ಎಂ ಮಹೇಶ್ ರವರು ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು