Tel: 7676775624 | Mail: info@yellowandred.in

Language: EN KAN

    Follow us :


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ೧೩೧೬ ನೇ ಮದ್ಯವರ್ಜನೆ ಶಿಬಿರ

Posted date: 05 Jan, 2019

Powered by:     Yellow and Red

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ೧೩೧೬ ನೇ ಮದ್ಯವರ್ಜನೆ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ೧೩೧೬ ನೇ ಮದ್ಯವರ್ಜನೆ ಶಿಬಿರವನ್ನು ನಗರದ ದೊಡ್ಡಮಳೂರಿನ ಸಾಯಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ವೀಣಾಚಂದ್ರು ರವರು ಇಂದು ಕೆಳವರ್ಗದ ಕೂಲಿಕಾರ್ಮಿಕರು ಕುಡಿತದ ಚಟಕ್ಕೆ ಬಿದ್ದು ತಾವು ದುಡಿದ ಹಣವನ್ನು ಸಂಪೂರ್ಣವಾಗಿ ವ್ಯಯಿಸಿ ತನ್ನನ್ನು ನಂಬಿದ ಕುಟುಂಬವನ್ನು ಬೀದಿಪಾಲು ಮಾಡುತ್ತಿದ್ದಾರೆ, ಅಂತಹವರನ್ನು ಕರೆತಂದು ಕುಡಿತದ ಚಟವನ್ನು ಬಿಡಿಸಲು ಶ್ರಮಿಸುತ್ತಿರುವ ಧರ್ಮಸ್ಥಳ ದ ಶ್ರೀ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ  ಈ  ಯೋಜನೆ ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.


ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲ ಬಿ ವಿ ಜಯರಾಮೇಗೌಡರು ಜಗತ್ತಿನಲ್ಲಿ ಮೂರು ರೀತಿಯ ಜೀವರಾಶಿಗಳಿದ್ದು ಅದನ್ನು ಮಾನವ, ಪ್ರಾಣಿ ಮತ್ತು ಸಸ್ಯ ರಾಶಿಗಳಾಗಿ ವಿಂಗಡಿಸಬಹುದು, ಉತ್ತಮವಾದ ಜೀವರಾಶಿ ಎಂದರೆ ಅದು ಮನುಷ್ಯ ಮಾತ್ರ, ದುರದೃಷ್ಟವಶಾತ್ ಕಲಿಯಬಾರದ್ದನ್ನೆಲ್ಲಾ ಕಲಿತು ಮಾಡಬಾರದ್ದನ್ನೆಲ್ಲಾ ಮಾಡುವವನು ಸಹ ಮನುಷ್ಯನೇ, ಇಂದು ಬಹುತೇಕ ಕೂಲಿ ಕಾರ್ಮಿಕರು ಕುಡಿತದ ಚಟಕ್ಕೆ ಬಲಿಯಾಗಿ ತಮ್ಮ ಆರೋಗ್ಯ, ವಯಸ್ಸು ಮತ್ತು ಕುಟುಂಬವನ್ನು ಕಳೆದುಕೊಳ್ಳುತ್ತಿದ್ದಾರೆ, ಇದರ ಬಗ್ಗೆ ಧರ್ಮಸ್ಥಳ ಅಭಿವೃದ್ಧಿ ಸಂಘದವರು ಒಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಇದನ್ನು ಕುಡಿತಕ್ಕೊಳಗಾಗಿರುವವರೆಲ್ಲರೂ ಸದುಪಯೋಗಪಡಿಸಿಕೊಳ್ಳಬೇಕೆಂದರು.


ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವೇದಿಕೆಯಲ್ಲಿ ದೊಡ್ಡ ಮಳೂರು ಗ್ರಾಮಪಂಚಾಯಿತಿ ಅಧ್ಯಕ್ಷ ರಮೇಶ್, ಜಿಲ್ಲಾ ನಿರ್ದೇಶಕ ಎ ಬಾಬುನಾಯ್ಕ, ಸೇರಿದಂತೆ ಅನೇಕ ಗಣ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಪದಾಧಿಕಾರಿಗಳು, ಸದಸ್ಯರು ಮತ್ತು ಕುಡಿತದ ಚಟ ಬಿಡಿಸುವ ಸಲುವಾಗಿ ಬಂದಿದ್ದ ಕುಟುಂಬದ ಸದಸ್ಯರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑