Tel: 7676775624 | Mail: info@yellowandred.in

Language: EN KAN

    Follow us :


ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ

Posted date: 19 Feb, 2019

Powered by:     Yellow and Red

ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ

ಪಾಂಡವಪುರ: ಗ್ರಾಮದೇವತೆ ದೇವಿರಮ್ಮನ ಹಬ್ಬದ ಆನಂದದಲ್ಲಿ ಮಿಂದೇಳುತ್ತಿದ್ದ ಗ್ರಾಮದ ಭಕ್ತ ವೃಂದದವರಿಗೆ ಬೆಳಗಿನ ಜಾವ ಮೂರು ಗಂಟೆಗೆ ದೇವರ ಮುಂದೆಯೇ ನಡೆದ ಕೊಲೆ ನೆರೆದಿದ್ದ ಸಹಸ್ರಾರು ಭಕ್ತರನ್ನು ಅಧೀರಗೊಳಿಸಿತು, 

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.


ಕಳೆದ ಆರು ತಿಂಗಳಿಂದ ಮದುವೆಯ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಲೇ ಇತ್ತು ಅದು ಇಂದು‌ ಕೊಲೆ‌ಯಲ್ಲಿ ಅಂತ್ಯ ಗೊಂಡಿತೇ ಅಥವಾ ವೈಷಮ್ಯ ಬೆಳೆಯುತ್ತದೆಯೇ ಎಂದು ಕಾದು ನೋಡಬೇಕಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.


ಊರ ಹೊರಗಿರುವ ಶ್ರೀ ದೇವೀರಮ್ಮ ದೇವಸ್ಥಾನದಿಂದ ಹೊರಟಿದ್ದ ಮೆರವಣಿಗೆ ಊರಿಗೆ ಪ್ರವೇಶ ಪಡೆದು ಶ್ರೀ ನಾರಾಯಣ ಸ್ವಾಮಿ ದೇವಸ್ಥಾನದ ಮುಂದೆ ಬರುತ್ತಿದ್ದಂತೆ ತಲವಾರುಗಳ ಸಮೇತ ಬಂದ ಮದನಕುಮಾರ, ಯೋಗೇಗೌಡ ಮತ್ತು ದೇವೇಗೌಡ ಎಂಬುವವರು ಯಜಮಾನ ದಾಸೇಗೌಡರ ಮಗ ತಿಮ್ಮೇಗೌಡ ಎಂಬುವವರನ್ನು ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.


ಪಾಂಡವಪುರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಯೋಗೇಗೌಡ ನ ಹೆಂಡತಿ ಮತ್ತು ಮಗಳನ್ನು ವಶಕ್ಕೆ ಪಡೆದು ಕೊಲೆಪಾತಕರಿಗೆ ಬಲೆ ಬೀಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑