ಸಮಾಜ ಸೇವಕ ವಿ ಪುಟ್ಟಯ್ಯ ನಿಧನ
ನಗರದ ವಿವೇಕಾನಂದ ಬಡಾವಣೆಯ ನಿವಾಸಿ, ಆಗ್ರೋ ಇಂಡಸ್ಟ್ರೀಸ್ ಕಂಪನಿಯ ಮಾಜಿ ಉದ್ಯೋಗಿ, ಅಗಸನಪುರ ಕಲ್ಲು ಕೈಗಾರಿಕಾ ಸಂಘದ ಕಾರ್ಯದರ್ಶಿ, ಸಮಾಜ ಸೇವಕ ಪುಟ್ಟಯ್ಯ ವಿ (೭೨) ಅವರು ಇಂದು ಮುಂಜಾನೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಅಸುನೀಗಿದರು.
ಪಾರ್ಥೀವ ಶರೀರವನ್ನು ಮಧ್ಯಾಹ್ನ ಎರಡು ಗಂಟೆಗೆ ನಗರದ ವಿವೇಕಾನಂದ ಬಡಾವಣೆಯ ಮನೆಯಲ್ಲಿ ಅಂತಿಮದರ್ಶನಕ್ಕೆ ಇಟ್ಟು ನಂತರ ಸ್ವಗ್ರಾಮ ಮಳವಳ್ಳಿ ತಾಲ್ಲೂಕಿನ ಅಗಸನಪುರ ಗ್ರಾಮದಲ್ಲಿ ಸಂಜೆ ೦೪:೦೦ ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಧರ್ಮಪತ್ನಿ ಜಯಲಕ್ಷ್ಮಮ್ಮ (ನಿ ಎಲ್ ಐ ಸಿ) ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅನೇಕ ಬಂಧುಗಳನ್ನು ಅಗಲಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು