ಜಿಲ್ಲಾಧಿಕಾರಿ ಡಾ.ಬಿ.ಆರ್. ಮಮತಾ ಅವರಿಗೆ ಲಕ್ಷ್ಮೀದೇವಿ ಪ್ರಶಸ್ತಿ ಪ್ರಧಾನ
ಬೆಂಗಳೂರು : ನಾಡಪ್ರಭು ರಾಜ್ಯ ಒಕ್ಕಲಿಗರ ಕೇಂದ್ರದ ದಶಮಾನೋತ್ಸವ ನಿಮಿತ್ತ ಬೆಂಗಳೂರಿನ ಕೆಂಗಲ್ ಹನುಮಂತಯ್ಯ ಕಲಾಸೌಧದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಮನಗರ ಜಿಲ್ಲಾಧಿಕಾರಿ ಡಾ.ಬಿ.ಆರ್.ಮಮತಾ ಅವರಿಗೆ ಮಹಾತ್ಯಾಗಿ ಲಕ್ಷೀದೇವಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ, ರಾಜ್ಯ ಒಕ್ಕಲಿಗರ ಕೇಂದ್ರದ ಅಧ್ಯಕ್ಷ ಲಕ್ಕೇಗೌಡ, ಗೌರವಾಧ್ಯಕ್ಷ ಕೆ.ಬಾಗೇಗೌಡ, ಆಡಳಿತ ಲೆಕ್ಕಪರಿಶೋಧಕರಾದ ಸಾಮಾಜಿಕ ಕಾರ್ಯಕರ್ತೆ ಶಾಂತಾ ರಾಮಸ್ವಾಮಿ, ಪಾಲಿಕೆ ಸದಸ್ಯ ಕೆಂಪೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿಕ್ರಿಯೆಗಳು