Tel: 7676775624 | Mail: info@yellowandred.in

Language: EN KAN

    Follow us :


ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ

Posted date: 04 Jul, 2019

Powered by:     Yellow and Red

ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ

ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ ೦೬೨೯) ಹಿಂದೂ ಜಾಗರಣ ವೇದಿಕೆಯ ಸುರೇಶ್ ಮತ್ತು ತಂಡ ಹಾಗೂ ಸುಣ್ಣಘಟ್ಟ ಗ್ರಾಮಸ್ಥರು ಸೇರಿ ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.


ಹಾಸನ ನೋಂದಣಿಯಿರುವ ಟೆಂಫೊದಲ್ಲಿ ಚನ್ನರಾಯಪಟ್ಟಣ ಮೂಲದ ನಾಲ್ಕು ಮಂದಿ ಖದೀಮರ ತಂಡವು ಆನೇಕಲ್ ಮಾರ್ಗವಾಗಿ ಕೇರಳದ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುವ ಕೆಲಸ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಗ್ರಾಮಸ್ಥರು ಟೆಂಪೋವನ್ನು ಅಡ್ಡಗಟ್ಟುತ್ತಿದ್ದಂತೆ ಇಬ್ಬರು ಪರಾರಿಯಾಗಿದ್ದು ಇಬ್ಬರನ್ನು ದಸ್ತಗಿರಿ ಮಾಡಿ ಎಫ್ ಐ ಆರ್ ದಾಖಲಿಸಲಾಗಿದೆ.


ಟೆಂಪೋ ಚಾಲಕ ಆಯಾಜ್ ಹಾಗೂ ಮತ್ತೊಬ್ಬ ಪರಾರಿಯಾಗಿದ್ದು, ಅಲೀಂ ಮತ್ತು ಅಬ್ಬಾಸ್ ಸಿಕ್ಕಿಬಿದ್ದಿದ್ದು ಕಳೆದ ಹಲವಾರು ತಿಂಗಳಿಂದ ಸಾತನೂರು-ಹಲಗೂರು ಮಾರ್ಗವಾಗಿ ಹಸುಗಳನ್ನು ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುವ ಕೆಲಸ ಮಾಡುತ್ತಿದ್ದೆವು ಎಂದು ಒಪ್ಪಿಕೊಂಡಿದ್ದಾರೆ.


ಚನ್ನಪಟ್ಟಣ ಮುಖ್ಯಮಂತ್ರಿ ಗಳ ಕ್ಷೇತ್ರ ಅಷ್ಟೇ ಅಲ್ಲದೆ ಪ್ರಭಾವಿ ರಾಜಕಾರಣಿಯಾದ ಡಿ ಕೆ ಶಿವಕುಮಾರ್ ಸಹ ಇದೇ ಜಿಲ್ಲೆಯವರಾಗಿದ್ದು ಇಂತಹ ಕ್ಷೇತ್ರದಲ್ಲೇ ಈ ರೀತಿಯ ಅಕ್ರಮಗಳು ನಡೆಯುತ್ತಿರುವುದು ರಾಜ್ಯದಲ್ಲಿ ನ ವ್ಯವಸ್ಥೆ ಹೇಗಿದೆ ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ವೇದಿಕೆಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಎರಡು ವಾಹನಗಳಲ್ಲಿ ಕ್ರಮವಾಗಿ ತುಂಬಿಸಿ ಕುಂಬಳಗೂಡಿನ ಬಳಿಯ ಗೋ ಶಾಲೆಯಲ್ಲಿ ಬಿಡಲಾಗಿದ್ದು ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೋಲಿಸರು ತನಿಖೆ ಕೈಗೊಂಡಿದ್ದಾರೆ.


ಈ ಸಮಯದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಗಜೇಂದ್ರ ಸಿಂಗ್, ವಕೀಲ ಸುರೇಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಆನಂದಸ್ವಾಮಿ, ಧನಂಜಯ, ಸತೀಶ್, ಚಂದ್ರಶೇಖರ, ಮಹಾಲಿಂಗ, ಸಂಜಯಕುಮಾರ್, ಯೋಗಾನಂದ, ಶ್ರೀಹರಿ,ಚಂದ್ರಶೇಖರ ರೆಡ್ಡಿ, ಆನಂದಕುಮಾರ್,ನಾಗೇಂದ್ರ ಸೇರಿದಂತೆ ಅನೇಕರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑