ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ ದಂಡಾಧಿಕಾರಿ ಸುದರ್ಶನ್
ಚನ್ನಪಟ್ಟಣ: ೭೩ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿ ವರ್ಷದಂತೆ ಅದ್ದೂರಿಯಾಗಿ ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಚರಿಸಲಾಗುವುದು ಎಂದು ನೂತನ ತಹಶಿಲ್ದಾರ್ ಸುದರ್ಶನ್ ತಿಳಿಸಿದರು.
ತಮ್ಮ ಕಛೇರಿಯಲ್ಲಿ ಕರೆದಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮುಖಂಡರು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿದ ನಂತರ ಈ ವಿಷಯ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅತಿ ಹೆಚ್ಚು ಜವಾಬ್ದಾರಿ ಉಳ್ಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಲಿ ಅಧೀನ ಸಿಬ್ಬಂದಿಗಳು ಮತ್ತು ಅನೇಕ ಇಲಾಖೆಯ ಗೈರುಹಾಜರಿಯಲ್ಲಿ ಸಭೆ ನಡೆದು ಮುಖ್ಯ ಭಾಷಣಕಾರರು ಮತ್ತು ಸನ್ಮಾನಿತರನ್ನು ಗುರುತಿಸಲು ಸಾಧ್ಯವಾಗದೆ ಬಿಇಓ ರವರನ್ನು ತಮ್ಮ ಕಛೇರಿಗೆ ಬರುವಂತೆ ತಿಳಿಸಿದರು.
ಯಾವುದೇ ರೀತಿಯ ಪಟ್ಟಿಯನ್ನು ಆಗಸ್ಟ್ ೦೫ ನೇ ತಾರಿಖಿನೊಳಗೆ ನೀಡಬೇಕೆಂದು ಸಂಘಸಂಸ್ಥೆಗಳ ಪದಾಧಿಕಾರಿಗಳು ಮತ್ತು ಅಧಿಕಾರಿಗಳಿಗೆ ಸೂಚಿಸಿದರು, ಎಲ್ಲಾ ಇಲಾಖೆಗಳಿಗೂ ವೇದಿಕೆಯ ಒಂದೊಂದು ಕೆಲಸಗಳನ್ನು ನಿರ್ವಹಿಸುವಂತೆ ಸೂಚಿಸಲಾಯಿತು.
ನಗರಸಭೆಯ ಆವರಣದಿಂದ ಮಹಾತ್ಮ ಗಾಂಧಿ ಮತ್ತು ಡಾ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಗಳನ್ನು ಮೆರವಣಿಗೆಯ ಮೂಲಕ ತಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುವುದು ಎಂದು ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು